Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿವಿುತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:13
8 ತಿಳಿವುಗಳ ಹೋಲಿಕೆ  

ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.


ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.


ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”


ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.


ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.


ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು