Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:4
19 ತಿಳಿವುಗಳ ಹೋಲಿಕೆ  

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.


ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.


ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು