Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:8
15 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.


ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು