Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:11
21 ತಿಳಿವುಗಳ ಹೋಲಿಕೆ  

ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.


‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು