Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:13
21 ತಿಳಿವುಗಳ ಹೋಲಿಕೆ  

ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.


ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು