Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:16
21 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.


ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.


ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.


ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.


ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.


ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.


ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು