Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:5
13 ತಿಳಿವುಗಳ ಹೋಲಿಕೆ  

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.


ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು