Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:7
16 ತಿಳಿವುಗಳ ಹೋಲಿಕೆ  

ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು