Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:1
20 ತಿಳಿವುಗಳ ಹೋಲಿಕೆ  

ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.


ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.


ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,


ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.


“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.


“ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು