Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:28
16 ತಿಳಿವುಗಳ ಹೋಲಿಕೆ  

ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.


ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು