Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:6
26 ತಿಳಿವುಗಳ ಹೋಲಿಕೆ  

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.


ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.


“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.


ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು