Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:8
35 ತಿಳಿವುಗಳ ಹೋಲಿಕೆ  

ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.


ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು