Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:6
25 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು