Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:8
26 ತಿಳಿವುಗಳ ಹೋಲಿಕೆ  

ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.


ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು