Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:1
20 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.


ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.


ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.


ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”


“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು