Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸತ್ತವನಿಗಾಗಿ ಅಳಬೇಡಿರಿ, ಬಡುಕೊಳ್ಳಬೇಡಿರಿ; ಸೆರೆಯಾದವನಿಗೇ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂವಿುಯನ್ನು ನೋಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:10
19 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.


ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.


ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.


ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.


ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು