Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:13
16 ತಿಳಿವುಗಳ ಹೋಲಿಕೆ  

ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.


“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.


ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,


‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು