Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:8
13 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು