Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:14
45 ತಿಳಿವುಗಳ ಹೋಲಿಕೆ  

ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.


ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.


ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು