Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:15
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.


ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.


ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.


ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.


ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು