Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:21
12 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,


ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.


‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು