Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:8
24 ತಿಳಿವುಗಳ ಹೋಲಿಕೆ  

“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.


ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.


“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


“ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು