Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:1
22 ತಿಳಿವುಗಳ ಹೋಲಿಕೆ  

ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.


ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.


ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.


ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು