Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:10
27 ತಿಳಿವುಗಳ ಹೋಲಿಕೆ  

ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.


ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.


ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.


ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು