Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:8
18 ತಿಳಿವುಗಳ ಹೋಲಿಕೆ  

ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


“ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.


ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು