Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು - ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದನಿಗೈಯುವನು; ಆತನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು; ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:30
25 ತಿಳಿವುಗಳ ಹೋಲಿಕೆ  

ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.


ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.


ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.


ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,


ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.


ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು