Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:31
14 ತಿಳಿವುಗಳ ಹೋಲಿಕೆ  

ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”


ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.


ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.


ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು