Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:18
13 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?


ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು