Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ರಾಜನಾದ ಯೆಹೋಯಾಕೀಮನು ಎಲ್ನಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ನಾತಾನನು ಅಕ್ಬೋರನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:22
10 ತಿಳಿವುಗಳ ಹೋಲಿಕೆ  

ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.


ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,


ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.


ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.


ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು