Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:15
20 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.


ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.


“ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.


ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು