Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:12
20 ತಿಳಿವುಗಳ ಹೋಲಿಕೆ  

‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,


ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು