Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:13
33 ತಿಳಿವುಗಳ ಹೋಲಿಕೆ  

ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.


ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು