Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 (ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:2
13 ತಿಳಿವುಗಳ ಹೋಲಿಕೆ  

ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.


ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.


ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು