Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:15
20 ತಿಳಿವುಗಳ ಹೋಲಿಕೆ  

ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು