Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:2
22 ತಿಳಿವುಗಳ ಹೋಲಿಕೆ  

ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,


ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.


“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.


ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು