Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪಪಟ್ಟೆನು; ತಿಳುವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು; ನನ್ನ ಯೌವನದ ಅವಮಾನವು ನನ್ನ ಮೇಲೆ ಹೊತ್ತ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:19
30 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.


ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.


ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು