Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಹೀಗೆನ್ನುತ್ತಾನೆ - ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಾನು ಆ ವಂಶವನ್ನು ನಿರಾಕರಿಸಿಬಿಟ್ಟೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನ್ನು ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನ್ನು ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನ್ನು ನಿರಾಕರಿಸಿದರೂ ನಿರಾಕರಿಸಬಹುದು.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:37
13 ತಿಳಿವುಗಳ ಹೋಲಿಕೆ  

ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.


“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು