Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ತಿರಿಗಿ ಸಮಾರ್ಯದ ಗುಡ್ಡಗಳಲ್ಲಿ ತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:5
15 ತಿಳಿವುಗಳ ಹೋಲಿಕೆ  

ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”


ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು


ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.


ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”


ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು