Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:24
35 ತಿಳಿವುಗಳ ಹೋಲಿಕೆ  

ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,


ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,


ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,


ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.


ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.


ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು