Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನಾದ ಯೆಹೋವನೇ, ನೀನು ನನಗೆ - ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ ಎಂದು ಅಪ್ಪಣೆಕೊಟ್ಟಿ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:25
11 ತಿಳಿವುಗಳ ಹೋಲಿಕೆ  

ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.


ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,


ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು