Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:18
21 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.


ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು