Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:6
36 ತಿಳಿವುಗಳ ಹೋಲಿಕೆ  

ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.


ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.


ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;


“ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು