Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:14
28 ತಿಳಿವುಗಳ ಹೋಲಿಕೆ  

ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.


ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.


ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು