Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:16
15 ತಿಳಿವುಗಳ ಹೋಲಿಕೆ  

“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.


ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು