Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:23
18 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,


“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು