Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:7
36 ತಿಳಿವುಗಳ ಹೋಲಿಕೆ  

ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,


ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.


“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು