Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:10
15 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.


ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.


ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.


ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,


ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು