Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಧಿಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:18
15 ತಿಳಿವುಗಳ ಹೋಲಿಕೆ  

ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಶಿಷ್ಟನಿಗೆ ದಂಡನೆ ಯುಕ್ತವಲ್ಲ, ಧರ್ಮಿಷ್ಠನಿಗೆ ಪೆಟ್ಟು ಅಧರ್ಮ.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.


ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು