Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಾಗಲಿ ಅವನ ಸೇವಕರಾಗಲಿ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:2
15 ತಿಳಿವುಗಳ ಹೋಲಿಕೆ  

ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”


ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.


ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.


ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.


ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.


ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು