Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:14
11 ತಿಳಿವುಗಳ ಹೋಲಿಕೆ  

ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು


ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು